Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಸಂತೆಯ ಸಂತ
ಸಂತೆಯ ಸಂತ
September 7, 2020
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
Copyright © 2025 Bayalu