Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ನೆಮ್ಮದಿ
ನೆಮ್ಮದಿ
April 6, 2020
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
Copyright © 2026 Bayalu