Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೋಟದ ಕೂಟ…
Share:
Poems May 10, 2023 ಕೆ.ಆರ್ ಮಂಗಳಾ

ನೋಟದ ಕೂಟ…

ಕಾಣುವುದೇ ಒಂದು
ನೋಟ ಹೇಳುವುದೇ ಬೇರೊಂದು
ಉಸಿರ ಘಮಲಲಿ ಇಲ್ಲಾ
ಹಿಡಿದ ವಾಸನೆಯ ಕುರುಹು
ಕಿವಿಗೆ ಬಿದ್ದ ಶಬ್ದಕೂ
ಕೇಳಿಸಿಕೊಂಡುದಕೂ
ಕಾಣಲಿಲ್ಲ ಸಾಮ್ಯತೆ
ನಾಲಿಗೆ ರುಚಿಸಿದ್ದಕ್ಕೂ
ಸವಿಯ ಬಯಕೆಗೂ ಎಲ್ಲಿದೆ ಹೋಲಿಕೆ
ಮೈಗೆ ತಾಕಿದ ಸ್ಪರ್ಶಕ್ಕೂ
ಅದಿತ್ತ ಸಂದೇಶಕೂ ಎಷ್ಟೊಂದು ಅಂತರ!
ಕಾಣದು ಕಣ್ಣು, ಕೇಳದು ಕಿವಿ,
ಆಘ್ರಾಣಿಸದು ಮೂಗು, ಸ್ಪರ್ಶಿಸದು ತ್ವಚೆ,
ರುಚಿಸಲೊಲ್ಲದು ನಾಲಿಗೆ ಇದ್ದುದನು ಇದ್ದ ಹಾಗೆ…

ಮನದ ಕೋಣೆಯ ಹೊಕ್ಕು
ಬರುವ ಗ್ರಹಿಕೆಗಳಿಗೆಲ್ಲಾ
ಸಾವಿರ ಬಣ್ಣ, ಸಾವಿರ ಭಾವ
ಅರ್ಥಗಳು, ಅನರ್ಥಗಳು ಸಾಲು ಸಾಲು…
ನೋಟ ಕೂಟದ ಮಾಟ
ಭವದ ಬಂಧನದಾಟ
ಇಂದ್ರಿಯಗಳ ಬಲೆಯಲ್ಲಿ
ಬದುಕು ಬದುಕಲರಿಯದೆ
ಇರುವಿಕೆಯ ನಿಜವ ಕಾಣದೆ
ಹಳವಂಡದಲೇ ನಿಟ್ಟುಸಿರನಿಡುತ
ಸವೆಸಿ ಬಿಡುವುದು ಕಾಲ…

ಗುರು ತೋರ್ದ ಉಪಾಯದಲಿ
ಇಂದ್ರಿಯ ಸಂಚ ನಿಲಿಸಿ
ಕಂಗಳ ಕರುಳ ಕತ್ತರಿಸಿ
ಕಲ್ಪನೆಯ ಸಂಚಯ ಇಲ್ಲವಾಗಿಸಲು
ನೋಟದ ಹಂಗಿಲ್ಲ ಕೂಟದುಪಟಳವಿಲ್ಲ
ನಿರ್ಮಲದ ತಿಳಿಯೊಡಲು
ನಿಚ್ಚಳದ ಜಗದಲ್ಲಿ ಸ್ವಚ್ಛ ಮನವು.

Previous post ಈ  ದಾರಿ…
ಈ ದಾರಿ…
Next post ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…

Related Posts

ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...
ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    May 10, 2023 Reply

    ಅನುಭವ.. ಅನುಭಾವ ಗಳನ್ನು ಎಷ್ಟೊಂದು ಸರಳವಾಗಿ ಹೇಳಿರುವಿರಿ.

  2. ಕೆ ಎಸ್ ಮಲ್ಲೇಶ್
    May 13, 2023 Reply

    ನಿಮ್ಮ ಕವನ “ನೋಟ ಕೂಟದ ಮಾಟ” ವನ್ನು ನಾನು ಹೀಗೆ ಗ್ರಹಿಸಿದೆ.
    ವಾಸ್ತವಕ್ಕೂ ಇಂದ್ರಿಯಗಳ ಗ್ರಹಿಕೆಯಿಂದ ಉಂಟಾದ ಅನುಭವಕ್ಕೂ ನಡುವಿರುವ ವ್ಯತ್ಯಾಸವನ್ನು ಕಾವ್ಯದ ಸಂಕ್ಷಿಪ್ತತೆ ಹಾಗೂ ಸೊಗಡಿನ ಮೂಲಕ ಕವನ ತಿಳಿಸಿದೆ. ಫಳಾರೆಂದು ಮಿಂಚಿತು, ಧಡ್ ಎಂದು ಸದ್ದಾಯಿತು, ಅಮೃತದ ಸವಿಗೆ ಬಾಯಿ ಚಪ್ಪರಿಸಿತ್ತು, ಘಮ್ ಎಂದು ಹೂವಿನ ವಾಸನೆ ಮೂಗಿಗೆ ಬಡಿದಿತ್ತು. ಚಟೀರ್ ಎಂದು ಕೆನ್ನೆಗೆ ಏಟು ಬಿತ್ತು ಎನ್ನುವಾಗ ನಿಜಕ್ಕೂ ಆ ಶಬ್ದಗಳೇ ಉಂಟಾದವೆ? ಖಂಡಿತ ಇಲ್ಲ. ಅಲ್ಲಿ ಉಂಟಾದ ನಿಜ ಶಬ್ದಗಳನ್ನು ಗ್ರಹಿಸುವ/ ತಿಳಿಯುವ/ ಸಂವಹಿಸುವ ಕ್ಷಮತೆ, ಸಾಮರ್ಥ್ಯ ನಮ್ಮಲ್ಲಿ ಅಂತರ್ಗತವಾಗಿದ್ದರೂ ಅವುಗಳ ಇರುವಿಕೆಯನ್ನೂ ಗಮನಿಸದಷ್ಟರ ಮಟ್ಟಿಗೆ ನಾವು ಭ್ರಮೆಗಳಿಗೆ ಆತುಕೊಂಡಿದ್ದೇವೆ. ಈ ಕಾರಣದಿಂದಲೇ ಭ್ರಮೆಗಳ ಬಗೆಗಿರುವ ವಿಶ್ವಾಸ ವಾಸ್ತವಗಳ ಬಗೆಗಿಲ್ಲ. ಆ ಭ್ರಮೆಗಳ ಬಲೆಯಲ್ಲಿ ನಮ್ಮ ಭವವನ್ನು ಬಂಧನವಾಗಿಸಿಕೊಂಡಿದ್ದೇವೆ.

    ಎಲ್ಲ ಸಂಬಂಧಗಳ ನಡುವೆ ಇದ್ದೂ ಅವು ತೋರುವ ಭ್ರಮೆಗಳ ಅಂಧಕಾರದಲ್ಲಿ ಸಿಲುಕದೆ ವಾಸ್ತವದ ಬೆಳಕಿನಲ್ಲಿ ನಡೆವವನೇ ಗುರು. ಈ ಜಟಿಲ ಜಗತ್ತಿನೊಳಗೆ ನಮ್ಮ ಇಂದ್ರಿಯಗಳು ಭ್ರಮೆಗಳ ಬೆನ್ನೇರಿ ಅಂಡಲೆಯುವುದನ್ನು ತಪ್ಪಿಸಿ, ಎಂದಿನಿಂದಲೋ ಅಂಟಿರುವ ಧೂಳನ್ನು ಝಾಡಿಸಿ, ಸತ್ಯದ ದರ್ಶನ ಮಾಡಿಸುವ ಶಕ್ತಿ ಆ ಗುರುವಿಗಿದೆ.

  3. ಪೆರೂರು ಜಾರು, ಉಡುಪಿ
    May 13, 2023 Reply

    ಅರ್ಥಗಳ, ಅನರ್ಥಗಳ ತುಲನೆಯಲಿ
    ವ್ಯರ್ಥವಾಗುವ ಸಮಯ.
    ಅರ್ಥ ಹಿಂದೆ ಅರ್ಥಾಪೇಕ್ಷೆ ಮುಂದೆ
    ಸ್ವಾರ್ಥದಲಿ ಸಾಯುತಿದೆ ಕಂಡುಂಡುದೆಲ್ಲ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ನನ್ನ ಶರಣರು…
ನನ್ನ ಶರಣರು…
April 9, 2021
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
Copyright © 2025 Bayalu