Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ಗಂಟಿನ ನಂಟು
Share:
Poems

ಗಂಟಿನ ನಂಟು

November 7, 2020 ಕೆ.ಆರ್ ಮಂಗಳಾ
ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಸನಾತನ ಧರ್ಮ
ಸನಾತನ ಧರ್ಮ
October 10, 2023
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಈ ಕನ್ನಡಿ
ಈ ಕನ್ನಡಿ
March 6, 2024
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ದೇಹ ದೇವಾಲಯ
ದೇಹ ದೇವಾಲಯ
June 12, 2025
Copyright © 2025 Bayalu