Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...
ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
ಪೊರೆವ ದನಿ…
ಪೊರೆವ ದನಿ…
August 11, 2025
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಕೇಳಿಸಿತೇ?
ಕೇಳಿಸಿತೇ?
April 6, 2024
Copyright © 2025 Bayalu