Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಬಯಲಾದ ದೇವರು
ಬಯಲಾದ ದೇವರು
January 15, 2026
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಗಣಾಚಾರ
ಗಣಾಚಾರ
August 8, 2021
ಶಿವಾಚಾರ
ಶಿವಾಚಾರ
April 9, 2021
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಈ ಕನ್ನಡಿ
ಈ ಕನ್ನಡಿ
March 6, 2024
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
Copyright © 2026 Bayalu