Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ಸೂರ್ಯ
ಸೂರ್ಯ
January 8, 2023
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
Copyright © 2026 Bayalu