Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...
ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಹುಡುಕಾಟ…
ಹುಡುಕಾಟ…
August 8, 2021
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
Copyright © 2026 Bayalu