Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ನೆಲದ ನಿಧಾನ
ನೆಲದ ನಿಧಾನ
April 29, 2018
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಅಚಲ ಪರಂಪರಾ ಪ್ರಸ್ಥಾನ
ಅಚಲ ಪರಂಪರಾ ಪ್ರಸ್ಥಾನ
September 6, 2026
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ವೀರ
ವೀರ
April 29, 2018
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
Copyright © 2026 Bayalu