Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...
ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave a Reply to Giri Devaraj Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭವ ರಾಟಾಳ
ಭವ ರಾಟಾಳ
September 10, 2022
ಇದ್ದಷ್ಟೇ…
ಇದ್ದಷ್ಟೇ…
January 10, 2021
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
Copyright © 2025 Bayalu