Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...
ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave a Reply to Vishwa Loki Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವನ ಕುದುರೆ…
ಶಿವನ ಕುದುರೆ…
May 1, 2019
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಬಯಲಾಟ
ಬಯಲಾಟ
March 17, 2021
Copyright © 2026 Bayalu