Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
ಗಜಲ್…
Share:
Poems

ಗಜಲ್…

February 16, 2026 ಜಬೀವುಲ್ಲಾ ಎಂ.ಅಸದ್
ಬದುಕೊಂದು ಪಯಣ ಸುಮ್ಮನೆ ನಡೆಯುತ ನೀ ಸಾಗು ನಿನ್ನ ಜೀವನ ಗಮ್ಯವ ಅರಿತು ನೆಮ್ಮದಿ ಅರಸುತ ನೀ ಸಾಗು ಯಾರಿಗೂ ಇಲ್ಲಿ ಯಾರಿಲ್ಲ ಯಾವುದೂ ಶಾಶ್ವತವಿಲ್ಲ ನಿನ್ನಲ್ಲಿರುವ ಪ್ರೀತಿಯನೆ...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪ
ಅನುಭವ ಮಂಟಪ
April 11, 2025
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಸನಾತನ ಧರ್ಮ
ಸನಾತನ ಧರ್ಮ
October 10, 2023
ದಾಸೋಹ ತತ್ವ
ದಾಸೋಹ ತತ್ವ
January 10, 2021
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಹಣತೆ ಸಾಕು
ಹಣತೆ ಸಾಕು
September 14, 2024
Copyright © 2026 Bayalu