Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಶಿವಾಚಾರ
ಶಿವಾಚಾರ
April 9, 2021
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಗುರುಪಥ
ಗುರುಪಥ
January 4, 2020
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
Copyright © 2025 Bayalu