Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ಕಾಯೋ ಗುರುವೇ…
Share:
Poems

ಕಾಯೋ ಗುರುವೇ…

February 11, 2022 ಕೆ.ಆರ್ ಮಂಗಳಾ
ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಬಯಲಾದ ದೇವರು
ಬಯಲಾದ ದೇವರು
January 15, 2026
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ವೀರ
ವೀರ
April 29, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
Copyright © 2026 Bayalu