Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
Copyright © 2026 Bayalu