Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಅನುಭವ ಮಂಟಪ
ಅನುಭವ ಮಂಟಪ
April 11, 2025
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
Copyright © 2026 Bayalu