Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾದ ದೇವರು
Share:
Poems January 15, 2026 ಜ್ಯೋತಿಲಿಂಗಪ್ಪ

ಬಯಲಾದ ದೇವರು

ಈ
ದೇವರು
ಒಂದು ಕನಸು

ನಿಜವೂ ಅಹುದು
ಸುಳ್ಳೂ ಅಹುದು

ಕಲ್ಪನೆಯ ಹಾಗೆ
ಕಾಣುವುದು ಕಾಣದು

ನಂಬಿದರೆ ಕೇಡಿಲ್ಲ
ನಂಬದಿರಲೂ ಕೇಡಿಲ್ಲ

ಕೇಡೆಲ್ಲವೂ ನನ್ನವು

ಈ
ಸುಳ್ಳಿಗೊಂದು ಕಾಣಿಸಲಾರೆ ನಿಜ
ಹುಡುಕುತಿರುವೆ ಸತ್ಯ ಮಿಥ್ಯ
ಮೂಗನ ಕನಸೊಂದು ಮೌನದ ಮೊನೆಯಲಿದೆ

ಸುಳ್ಳು ಕತೆಗಳ ಸತ್ಯದ ಹುಡುಕಾಟ
ಜೀವ ಮರೆಯ ಸಾವು
ಸಾವಿನ ಮರೆಯ ಜೀವನ
ಬದುಕಿನ ಮರೆಯ ಬಯಲು

ಒಣಗಿದ ಎಲೆ
ಉದುರಲು ಕಾಯುತಿರುವ ಚಿಗುರು

ಮೌನವಾದಷ್ಟೂ ಕ್ಷೇಮ
ಹೆತ್ತ ಕರುವ ನೆಕ್ಕಿ ನೆಕ್ಕಿ ತೊಳೆದು ನಿಲಿಸುವ ತಾಯತನ

ನಾ ಹೆತ್ತ ಕೂಸಲ್ಲವೇ…
ಈ ದೇವರು ಬಯಲೇ…

Previous post ಹುಡುಕಾಟ
ಹುಡುಕಾಟ
Next post ನಾನೆಂಬ ನಿನಾದ…
ನಾನೆಂಬ ನಿನಾದ…

Related Posts

ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 3

  1. Vijaya Bagevadi
    Jan 20, 2026 Reply

    ಸುಳ್ಳು ಕತೆಗಳ ಸತ್ಯದ ಹುಡುಕಾಟ😟

  2. Dr. Umesh Soraba
    Jan 23, 2026 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ಕವಿತೆಗಳಿಗೆ ಭಾವಲೋಕದ ಸತ್ಯ-ಮಿಥ್ಯಗಳೊಂದಿಗೆ ಸೆಣಸುವ ಆರೋಗ್ಯಕರ ಜವಾಬ್ದಾರಿಯ ನಡೆಯೊಂದು ಇದ್ದೇ ಇದೆ. ಇದು ‘ಬಯಲಾದ ದೇವರು’ ಕವಿತೆಯಲ್ಲೂ ಮುಂದುವರೆದಿರುವುದನ್ನು ಕಾಣಬಹುದು… ದೇವರ ಅಸ್ತಿತ್ವದ ಕುರಿತು ಈಗಾಗಲೇ ಇರುವ ಪ್ರಚಲಿತ ವ್ಯಾಖ್ಯಾನ-ವಿವರಣೆಗಳ ಮಧ್ಯೆ ಈ ಕವಿತೆಯಲ್ಲಿ ದೇವರು ಕುರಿತು ಆಲೋಚಿಸಿರುವ ಬಗೆ ಭಿನ್ನವೂ ಆಪ್ತವೂ ಆದುದು. ಈ ದೇವರನ್ನು ನಂಬಿದರೂ ಕೇಡಿಲ್ಲ…. ನಂಬದಿರಲೂ ಕೇಡಿಲ್ಲ…. ಒಣಗಿದ ಎಲೆ ಉದುರಲು ಕಾಯುತಿರುವ ಚಿಗುರಿನಂತೆ ಈ ದೇವರು ಮರಮರಳಿ ಹೊಸತಾಗುವ ರೂಪಕ. ಹುಟ್ಟು- ಸಾವುಗಳ ಮಧ್ಯೆ ಬದುಕಿನ ಸ್ಥಿತಿಸ್ಥಾಪಕತೆಗೆ ಕಾರಕ… ಹೀಗೆ ದೇವರು ಮತ್ತು ದೇವರ ಅಸ್ತಿತ್ವ ಮಾನವ ಪ್ರಜ್ಞೆಯಲ್ಲಿ ನಿಂತ ಬಗೆಯನ್ನು ಕವಿ ಇಲ್ಲಿ ಭಾವಿಸಿದ ಮತ್ತು ಭಾಷ್ಯೀಕರಿಸಿದ ಬಗೆ ವಿಶಿಷ್ಟವಾಗಿದೆ. ಕವಿಗೆ ಅಭಿನಂದನೆಗಳು.

  3. ನವೀನ್ ಕುಮಾರ್, ಬೆಟಗೇರಿ
    Feb 5, 2026 Reply

    ನಿಜ, ಸುಳ್ಳು ಎರಡೂ ಆಗಿರುವುದರಿಂದಲೇ ಆ ದೇವರು ಮನುಷ್ಯನ ಹಳಬಂಡ ಕನಸು, ಕವನ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
Copyright © 2026 Bayalu