Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾದ ದೇವರು
Share:
Poems January 15, 2026 ಜ್ಯೋತಿಲಿಂಗಪ್ಪ

ಬಯಲಾದ ದೇವರು

ಈ
ದೇವರು
ಒಂದು ಕನಸು

ನಿಜವೂ ಅಹುದು
ಸುಳ್ಳೂ ಅಹುದು

ಕಲ್ಪನೆಯ ಹಾಗೆ
ಕಾಣುವುದು ಕಾಣದು

ನಂಬಿದರೆ ಕೇಡಿಲ್ಲ
ನಂಬದಿರಲೂ ಕೇಡಿಲ್ಲ

ಕೇಡೆಲ್ಲವೂ ನನ್ನವು

ಈ
ಸುಳ್ಳಿಗೊಂದು ಕಾಣಿಸಲಾರೆ ನಿಜ
ಹುಡುಕುತಿರುವೆ ಸತ್ಯ ಮಿಥ್ಯ
ಮೂಗನ ಕನಸೊಂದು ಮೌನದ ಮೊನೆಯಲಿದೆ

ಸುಳ್ಳು ಕತೆಗಳ ಸತ್ಯದ ಹುಡುಕಾಟ
ಜೀವ ಮರೆಯ ಸಾವು
ಸಾವಿನ ಮರೆಯ ಜೀವನ
ಬದುಕಿನ ಮರೆಯ ಬಯಲು

ಒಣಗಿದ ಎಲೆ
ಉದುರಲು ಕಾಯುತಿರುವ ಚಿಗುರು

ಮೌನವಾದಷ್ಟೂ ಕ್ಷೇಮ
ಹೆತ್ತ ಕರುವ ನೆಕ್ಕಿ ನೆಕ್ಕಿ ತೊಳೆದು ನಿಲಿಸುವ ತಾಯತನ

ನಾ ಹೆತ್ತ ಕೂಸಲ್ಲವೇ…
ಈ ದೇವರು ಬಯಲೇ…

Previous post ಹುಡುಕಾಟ
ಹುಡುಕಾಟ
Next post ನಾನೆಂಬ ನಿನಾದ…
ನಾನೆಂಬ ನಿನಾದ…

Related Posts

ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...
ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...

Comments 3

  1. Vijaya Bagevadi
    Jan 20, 2026 Reply

    ಸುಳ್ಳು ಕತೆಗಳ ಸತ್ಯದ ಹುಡುಕಾಟ😟

  2. Dr. Umesh Soraba
    Jan 23, 2026 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ಕವಿತೆಗಳಿಗೆ ಭಾವಲೋಕದ ಸತ್ಯ-ಮಿಥ್ಯಗಳೊಂದಿಗೆ ಸೆಣಸುವ ಆರೋಗ್ಯಕರ ಜವಾಬ್ದಾರಿಯ ನಡೆಯೊಂದು ಇದ್ದೇ ಇದೆ. ಇದು ‘ಬಯಲಾದ ದೇವರು’ ಕವಿತೆಯಲ್ಲೂ ಮುಂದುವರೆದಿರುವುದನ್ನು ಕಾಣಬಹುದು… ದೇವರ ಅಸ್ತಿತ್ವದ ಕುರಿತು ಈಗಾಗಲೇ ಇರುವ ಪ್ರಚಲಿತ ವ್ಯಾಖ್ಯಾನ-ವಿವರಣೆಗಳ ಮಧ್ಯೆ ಈ ಕವಿತೆಯಲ್ಲಿ ದೇವರು ಕುರಿತು ಆಲೋಚಿಸಿರುವ ಬಗೆ ಭಿನ್ನವೂ ಆಪ್ತವೂ ಆದುದು. ಈ ದೇವರನ್ನು ನಂಬಿದರೂ ಕೇಡಿಲ್ಲ…. ನಂಬದಿರಲೂ ಕೇಡಿಲ್ಲ…. ಒಣಗಿದ ಎಲೆ ಉದುರಲು ಕಾಯುತಿರುವ ಚಿಗುರಿನಂತೆ ಈ ದೇವರು ಮರಮರಳಿ ಹೊಸತಾಗುವ ರೂಪಕ. ಹುಟ್ಟು- ಸಾವುಗಳ ಮಧ್ಯೆ ಬದುಕಿನ ಸ್ಥಿತಿಸ್ಥಾಪಕತೆಗೆ ಕಾರಕ… ಹೀಗೆ ದೇವರು ಮತ್ತು ದೇವರ ಅಸ್ತಿತ್ವ ಮಾನವ ಪ್ರಜ್ಞೆಯಲ್ಲಿ ನಿಂತ ಬಗೆಯನ್ನು ಕವಿ ಇಲ್ಲಿ ಭಾವಿಸಿದ ಮತ್ತು ಭಾಷ್ಯೀಕರಿಸಿದ ಬಗೆ ವಿಶಿಷ್ಟವಾಗಿದೆ. ಕವಿಗೆ ಅಭಿನಂದನೆಗಳು.

  3. ನವೀನ್ ಕುಮಾರ್, ಬೆಟಗೇರಿ
    Feb 5, 2026 Reply

    ನಿಜ, ಸುಳ್ಳು ಎರಡೂ ಆಗಿರುವುದರಿಂದಲೇ ಆ ದೇವರು ಮನುಷ್ಯನ ಹಳಬಂಡ ಕನಸು, ಕವನ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಗಣಾಚಾರ
ಗಣಾಚಾರ
August 8, 2021
ನೋಟದ ಕೂಟ…
ನೋಟದ ಕೂಟ…
May 10, 2023
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಗುರುವಂದನೆ
ಗುರುವಂದನೆ
October 13, 2022
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
Copyright © 2026 Bayalu