Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾದ ದೇವರು
Share:
Poems January 15, 2026 ಜ್ಯೋತಿಲಿಂಗಪ್ಪ

ಬಯಲಾದ ದೇವರು

ಈ
ದೇವರು
ಒಂದು ಕನಸು

ನಿಜವೂ ಅಹುದು
ಸುಳ್ಳೂ ಅಹುದು

ಕಲ್ಪನೆಯ ಹಾಗೆ
ಕಾಣುವುದು ಕಾಣದು

ನಂಬಿದರೆ ಕೇಡಿಲ್ಲ
ನಂಬದಿರಲೂ ಕೇಡಿಲ್ಲ

ಕೇಡೆಲ್ಲವೂ ನನ್ನವು

ಈ
ಸುಳ್ಳಿಗೊಂದು ಕಾಣಿಸಲಾರೆ ನಿಜ
ಹುಡುಕುತಿರುವೆ ಸತ್ಯ ಮಿಥ್ಯ
ಮೂಗನ ಕನಸೊಂದು ಮೌನದ ಮೊನೆಯಲಿದೆ

ಸುಳ್ಳು ಕತೆಗಳ ಸತ್ಯದ ಹುಡುಕಾಟ
ಜೀವ ಮರೆಯ ಸಾವು
ಸಾವಿನ ಮರೆಯ ಜೀವನ
ಬದುಕಿನ ಮರೆಯ ಬಯಲು

ಒಣಗಿದ ಎಲೆ
ಉದುರಲು ಕಾಯುತಿರುವ ಚಿಗುರು

ಮೌನವಾದಷ್ಟೂ ಕ್ಷೇಮ
ಹೆತ್ತ ಕರುವ ನೆಕ್ಕಿ ನೆಕ್ಕಿ ತೊಳೆದು ನಿಲಿಸುವ ತಾಯತನ

ನಾ ಹೆತ್ತ ಕೂಸಲ್ಲವೇ…
ಈ ದೇವರು ಬಯಲೇ…

Previous post ಹುಡುಕಾಟ
ಹುಡುಕಾಟ
Next post ನಾನೆಂಬ ನಿನಾದ…
ನಾನೆಂಬ ನಿನಾದ…

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Comments 3

  1. Vijaya Bagevadi
    Jan 20, 2026 Reply

    ಸುಳ್ಳು ಕತೆಗಳ ಸತ್ಯದ ಹುಡುಕಾಟ😟

  2. Dr. Umesh Soraba
    Jan 23, 2026 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ಕವಿತೆಗಳಿಗೆ ಭಾವಲೋಕದ ಸತ್ಯ-ಮಿಥ್ಯಗಳೊಂದಿಗೆ ಸೆಣಸುವ ಆರೋಗ್ಯಕರ ಜವಾಬ್ದಾರಿಯ ನಡೆಯೊಂದು ಇದ್ದೇ ಇದೆ. ಇದು ‘ಬಯಲಾದ ದೇವರು’ ಕವಿತೆಯಲ್ಲೂ ಮುಂದುವರೆದಿರುವುದನ್ನು ಕಾಣಬಹುದು… ದೇವರ ಅಸ್ತಿತ್ವದ ಕುರಿತು ಈಗಾಗಲೇ ಇರುವ ಪ್ರಚಲಿತ ವ್ಯಾಖ್ಯಾನ-ವಿವರಣೆಗಳ ಮಧ್ಯೆ ಈ ಕವಿತೆಯಲ್ಲಿ ದೇವರು ಕುರಿತು ಆಲೋಚಿಸಿರುವ ಬಗೆ ಭಿನ್ನವೂ ಆಪ್ತವೂ ಆದುದು. ಈ ದೇವರನ್ನು ನಂಬಿದರೂ ಕೇಡಿಲ್ಲ…. ನಂಬದಿರಲೂ ಕೇಡಿಲ್ಲ…. ಒಣಗಿದ ಎಲೆ ಉದುರಲು ಕಾಯುತಿರುವ ಚಿಗುರಿನಂತೆ ಈ ದೇವರು ಮರಮರಳಿ ಹೊಸತಾಗುವ ರೂಪಕ. ಹುಟ್ಟು- ಸಾವುಗಳ ಮಧ್ಯೆ ಬದುಕಿನ ಸ್ಥಿತಿಸ್ಥಾಪಕತೆಗೆ ಕಾರಕ… ಹೀಗೆ ದೇವರು ಮತ್ತು ದೇವರ ಅಸ್ತಿತ್ವ ಮಾನವ ಪ್ರಜ್ಞೆಯಲ್ಲಿ ನಿಂತ ಬಗೆಯನ್ನು ಕವಿ ಇಲ್ಲಿ ಭಾವಿಸಿದ ಮತ್ತು ಭಾಷ್ಯೀಕರಿಸಿದ ಬಗೆ ವಿಶಿಷ್ಟವಾಗಿದೆ. ಕವಿಗೆ ಅಭಿನಂದನೆಗಳು.

  3. ನವೀನ್ ಕುಮಾರ್, ಬೆಟಗೇರಿ
    Feb 5, 2026 Reply

    ನಿಜ, ಸುಳ್ಳು ಎರಡೂ ಆಗಿರುವುದರಿಂದಲೇ ಆ ದೇವರು ಮನುಷ್ಯನ ಹಳಬಂಡ ಕನಸು, ಕವನ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ  ದಾರಿ…
ಈ ದಾರಿ…
May 10, 2023
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಕುರುಹೇ ಬಯಲು
ಕುರುಹೇ ಬಯಲು
February 16, 2026
WHO AM I?
WHO AM I?
June 17, 2020
ಹಣತೆ ಸಾಕು
ಹಣತೆ ಸಾಕು
September 14, 2024
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
Copyright © 2026 Bayalu