Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾದ ದೇವರು
Share:
Poems January 15, 2026 ಜ್ಯೋತಿಲಿಂಗಪ್ಪ

ಬಯಲಾದ ದೇವರು

ಈ
ದೇವರು
ಒಂದು ಕನಸು

ನಿಜವೂ ಅಹುದು
ಸುಳ್ಳೂ ಅಹುದು

ಕಲ್ಪನೆಯ ಹಾಗೆ
ಕಾಣುವುದು ಕಾಣದು

ನಂಬಿದರೆ ಕೇಡಿಲ್ಲ
ನಂಬದಿರಲೂ ಕೇಡಿಲ್ಲ

ಕೇಡೆಲ್ಲವೂ ನನ್ನವು

ಈ
ಸುಳ್ಳಿಗೊಂದು ಕಾಣಿಸಲಾರೆ ನಿಜ
ಹುಡುಕುತಿರುವೆ ಸತ್ಯ ಮಿಥ್ಯ
ಮೂಗನ ಕನಸೊಂದು ಮೌನದ ಮೊನೆಯಲಿದೆ

ಸುಳ್ಳು ಕತೆಗಳ ಸತ್ಯದ ಹುಡುಕಾಟ
ಜೀವ ಮರೆಯ ಸಾವು
ಸಾವಿನ ಮರೆಯ ಜೀವನ
ಬದುಕಿನ ಮರೆಯ ಬಯಲು

ಒಣಗಿದ ಎಲೆ
ಉದುರಲು ಕಾಯುತಿರುವ ಚಿಗುರು

ಮೌನವಾದಷ್ಟೂ ಕ್ಷೇಮ
ಹೆತ್ತ ಕರುವ ನೆಕ್ಕಿ ನೆಕ್ಕಿ ತೊಳೆದು ನಿಲಿಸುವ ತಾಯತನ

ನಾ ಹೆತ್ತ ಕೂಸಲ್ಲವೇ…
ಈ ದೇವರು ಬಯಲೇ…

Previous post ಹುಡುಕಾಟ
ಹುಡುಕಾಟ
Next post ನಾನೆಂಬ ನಿನಾದ…
ನಾನೆಂಬ ನಿನಾದ…

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Comments 3

  1. Vijaya Bagevadi
    Jan 20, 2026 Reply

    ಸುಳ್ಳು ಕತೆಗಳ ಸತ್ಯದ ಹುಡುಕಾಟ😟

  2. Dr. Umesh Soraba
    Jan 23, 2026 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ಕವಿತೆಗಳಿಗೆ ಭಾವಲೋಕದ ಸತ್ಯ-ಮಿಥ್ಯಗಳೊಂದಿಗೆ ಸೆಣಸುವ ಆರೋಗ್ಯಕರ ಜವಾಬ್ದಾರಿಯ ನಡೆಯೊಂದು ಇದ್ದೇ ಇದೆ. ಇದು ‘ಬಯಲಾದ ದೇವರು’ ಕವಿತೆಯಲ್ಲೂ ಮುಂದುವರೆದಿರುವುದನ್ನು ಕಾಣಬಹುದು… ದೇವರ ಅಸ್ತಿತ್ವದ ಕುರಿತು ಈಗಾಗಲೇ ಇರುವ ಪ್ರಚಲಿತ ವ್ಯಾಖ್ಯಾನ-ವಿವರಣೆಗಳ ಮಧ್ಯೆ ಈ ಕವಿತೆಯಲ್ಲಿ ದೇವರು ಕುರಿತು ಆಲೋಚಿಸಿರುವ ಬಗೆ ಭಿನ್ನವೂ ಆಪ್ತವೂ ಆದುದು. ಈ ದೇವರನ್ನು ನಂಬಿದರೂ ಕೇಡಿಲ್ಲ…. ನಂಬದಿರಲೂ ಕೇಡಿಲ್ಲ…. ಒಣಗಿದ ಎಲೆ ಉದುರಲು ಕಾಯುತಿರುವ ಚಿಗುರಿನಂತೆ ಈ ದೇವರು ಮರಮರಳಿ ಹೊಸತಾಗುವ ರೂಪಕ. ಹುಟ್ಟು- ಸಾವುಗಳ ಮಧ್ಯೆ ಬದುಕಿನ ಸ್ಥಿತಿಸ್ಥಾಪಕತೆಗೆ ಕಾರಕ… ಹೀಗೆ ದೇವರು ಮತ್ತು ದೇವರ ಅಸ್ತಿತ್ವ ಮಾನವ ಪ್ರಜ್ಞೆಯಲ್ಲಿ ನಿಂತ ಬಗೆಯನ್ನು ಕವಿ ಇಲ್ಲಿ ಭಾವಿಸಿದ ಮತ್ತು ಭಾಷ್ಯೀಕರಿಸಿದ ಬಗೆ ವಿಶಿಷ್ಟವಾಗಿದೆ. ಕವಿಗೆ ಅಭಿನಂದನೆಗಳು.

  3. ನವೀನ್ ಕುಮಾರ್, ಬೆಟಗೇರಿ
    Feb 5, 2026 Reply

    ನಿಜ, ಸುಳ್ಳು ಎರಡೂ ಆಗಿರುವುದರಿಂದಲೇ ಆ ದೇವರು ಮನುಷ್ಯನ ಹಳಬಂಡ ಕನಸು, ಕವನ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಶಾಂತಿ
ಶಾಂತಿ
April 11, 2025
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ನನ್ನೆದುರು ನಾ…
ನನ್ನೆದುರು ನಾ…
March 6, 2024
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
Copyright © 2026 Bayalu