Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬರಿದಾಗುವ ಬೆರಗು
Share:
Poems February 6, 2025 ಜಬೀವುಲ್ಲಾ ಎಂ.ಅಸದ್

ಬರಿದಾಗುವ ಬೆರಗು

ನಿಂತಲ್ಲೇ ಬಯಲು
ಕೊನೆಗೊಳ್ಳದು ಗೆಳೆಯ
ನಡೆಯಬೇಕು ನೀನೇ ಖುದ್ದು
ಭವದ ಬೇಲಿಗಳ ದಾಟುತ್ತ
ಸಾವಿರ ಹೆಜ್ಜೆಗಳ ಮಿಡಿದು
ಈ ಸಮಯ

ಜಗ ಹುಚ್ಚನೆಂದರೂ ಸರಿಯೇ
ಹತ್ತು ಮುಳ್ಳುಗಳ ಮಧ್ಯೆ
ಹೂವೊಂದು ಬಿರಿವಂತೆ
ನೂರು ಕಷ್ಟಗಳ ನಡುವೆ
ನಲುಗದೆ ನಗಬೇಕು ಹಾಗೆ!

ಕಣ್ ಹಾಯಿಸಿದಷ್ಟೇ
ನೆಲ, ಕಡಲು, ಆಗಸ ಎಲ್ಲಾ
ಕಣ್ಣಿನಿಂದಾಚೆಗೆ ಕಾಣಬೇಕು
ಕಂಡುಕೊಳ್ಳಬೇಕು
ಕರ ಚಾಚಬೇಕು
ಕರೆತರಬೇಕು
ಅಸಾಧ್ಯತೆಯಲ್ಲಿಯೇ
ಸಾಧ್ಯತೆ ಅವಿತಿದೆ
ಸಾಧಿಬೇಕಷ್ಟೆ ಗೆಳೆಯ

ಇರದ ದಾರಿಗಳ ಒಮ್ಮೆ ಶೋಧಿಸಿ ನೋಡು
‘ಇಲ್ಲಿ ಮೊದಲು ಏನೂ ಇರಲಿಲ್ಲ’
ಎಂದು ತಿಳಿಯುವುದು
ಸಿಕ್ಕದ್ದು ಕಳೆದು
ಎಲ್ಲವೂ ನಶ್ವರ ಎಂಬ ಸತ್ಯ ಬೆಳಗುವುದು

ಗುರಿಗೂ ಗಮ್ಯಕೂ
ಅದೇಷ್ಟು ದೂರ
ಮುಗಿಲಿಗೂ ಕಡಲಿಗೂ ಇದ್ದಷ್ಟೇ ಅಂತರ
ಅಂಗೈಗೆ ಸಿಕ್ಕಂತೆ ಸಿಕ್ಕಿ
ಮರಳ ಕಣಗಳಂತೆ ಸೋರಿ
ಬರಿದಾಗುವ ಬೆರಗು
ಈ ಬದುಕ ವೈಖರಿ.

Previous post ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
Next post ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…

Related Posts

ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 2

  1. ದಿನೇಶ್ ಕೆ.ಪಿ
    Feb 18, 2025 Reply

    ಬೆರಗೇ ಬದಲಾಗುವಾಗ ಉಳಿಯೋದೇನಿದೆ…. ಬರೀ ಶೂನ್ಯ 😒

  2. ಕಾಳಿದಾಸ ಲಮಾಣಿ
    Feb 22, 2025 Reply

    ಬಣ್ಣನೆ ಬೇಕೇ ಬಯಲಿಗೆ, ಬರಿದಾಗುವ ಚೆಲುವಿಗೆ… ಆದರೂ ಜೀವನ ಶೂನ್ಯ ಮಾತ್ರ ಅಲ್ಲಾ ಅಣ್ಣಾ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಹುಡುಕಾಟ
ಹುಡುಕಾಟ
July 21, 2024
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
Copyright © 2026 Bayalu