Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬರಿದಾಗುವ ಬೆರಗು
Share:
Poems February 6, 2025 ಜಬೀವುಲ್ಲಾ ಎಂ.ಅಸದ್

ಬರಿದಾಗುವ ಬೆರಗು

ನಿಂತಲ್ಲೇ ಬಯಲು
ಕೊನೆಗೊಳ್ಳದು ಗೆಳೆಯ
ನಡೆಯಬೇಕು ನೀನೇ ಖುದ್ದು
ಭವದ ಬೇಲಿಗಳ ದಾಟುತ್ತ
ಸಾವಿರ ಹೆಜ್ಜೆಗಳ ಮಿಡಿದು
ಈ ಸಮಯ

ಜಗ ಹುಚ್ಚನೆಂದರೂ ಸರಿಯೇ
ಹತ್ತು ಮುಳ್ಳುಗಳ ಮಧ್ಯೆ
ಹೂವೊಂದು ಬಿರಿವಂತೆ
ನೂರು ಕಷ್ಟಗಳ ನಡುವೆ
ನಲುಗದೆ ನಗಬೇಕು ಹಾಗೆ!

ಕಣ್ ಹಾಯಿಸಿದಷ್ಟೇ
ನೆಲ, ಕಡಲು, ಆಗಸ ಎಲ್ಲಾ
ಕಣ್ಣಿನಿಂದಾಚೆಗೆ ಕಾಣಬೇಕು
ಕಂಡುಕೊಳ್ಳಬೇಕು
ಕರ ಚಾಚಬೇಕು
ಕರೆತರಬೇಕು
ಅಸಾಧ್ಯತೆಯಲ್ಲಿಯೇ
ಸಾಧ್ಯತೆ ಅವಿತಿದೆ
ಸಾಧಿಬೇಕಷ್ಟೆ ಗೆಳೆಯ

ಇರದ ದಾರಿಗಳ ಒಮ್ಮೆ ಶೋಧಿಸಿ ನೋಡು
‘ಇಲ್ಲಿ ಮೊದಲು ಏನೂ ಇರಲಿಲ್ಲ’
ಎಂದು ತಿಳಿಯುವುದು
ಸಿಕ್ಕದ್ದು ಕಳೆದು
ಎಲ್ಲವೂ ನಶ್ವರ ಎಂಬ ಸತ್ಯ ಬೆಳಗುವುದು

ಗುರಿಗೂ ಗಮ್ಯಕೂ
ಅದೇಷ್ಟು ದೂರ
ಮುಗಿಲಿಗೂ ಕಡಲಿಗೂ ಇದ್ದಷ್ಟೇ ಅಂತರ
ಅಂಗೈಗೆ ಸಿಕ್ಕಂತೆ ಸಿಕ್ಕಿ
ಮರಳ ಕಣಗಳಂತೆ ಸೋರಿ
ಬರಿದಾಗುವ ಬೆರಗು
ಈ ಬದುಕ ವೈಖರಿ.

Previous post ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
Next post ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 2

  1. ದಿನೇಶ್ ಕೆ.ಪಿ
    Feb 18, 2025 Reply

    ಬೆರಗೇ ಬದಲಾಗುವಾಗ ಉಳಿಯೋದೇನಿದೆ…. ಬರೀ ಶೂನ್ಯ 😒

  2. ಕಾಳಿದಾಸ ಲಮಾಣಿ
    Feb 22, 2025 Reply

    ಬಣ್ಣನೆ ಬೇಕೇ ಬಯಲಿಗೆ, ಬರಿದಾಗುವ ಚೆಲುವಿಗೆ… ಆದರೂ ಜೀವನ ಶೂನ್ಯ ಮಾತ್ರ ಅಲ್ಲಾ ಅಣ್ಣಾ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ದಾಸೋಹ ತತ್ವ
ದಾಸೋಹ ತತ್ವ
January 10, 2021
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
Copyright © 2026 Bayalu