Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬರಿದಾಗುವ ಬೆರಗು
Share:
Poems February 6, 2025 ಜಬೀವುಲ್ಲಾ ಎಂ.ಅಸದ್

ಬರಿದಾಗುವ ಬೆರಗು

ನಿಂತಲ್ಲೇ ಬಯಲು
ಕೊನೆಗೊಳ್ಳದು ಗೆಳೆಯ
ನಡೆಯಬೇಕು ನೀನೇ ಖುದ್ದು
ಭವದ ಬೇಲಿಗಳ ದಾಟುತ್ತ
ಸಾವಿರ ಹೆಜ್ಜೆಗಳ ಮಿಡಿದು
ಈ ಸಮಯ

ಜಗ ಹುಚ್ಚನೆಂದರೂ ಸರಿಯೇ
ಹತ್ತು ಮುಳ್ಳುಗಳ ಮಧ್ಯೆ
ಹೂವೊಂದು ಬಿರಿವಂತೆ
ನೂರು ಕಷ್ಟಗಳ ನಡುವೆ
ನಲುಗದೆ ನಗಬೇಕು ಹಾಗೆ!

ಕಣ್ ಹಾಯಿಸಿದಷ್ಟೇ
ನೆಲ, ಕಡಲು, ಆಗಸ ಎಲ್ಲಾ
ಕಣ್ಣಿನಿಂದಾಚೆಗೆ ಕಾಣಬೇಕು
ಕಂಡುಕೊಳ್ಳಬೇಕು
ಕರ ಚಾಚಬೇಕು
ಕರೆತರಬೇಕು
ಅಸಾಧ್ಯತೆಯಲ್ಲಿಯೇ
ಸಾಧ್ಯತೆ ಅವಿತಿದೆ
ಸಾಧಿಬೇಕಷ್ಟೆ ಗೆಳೆಯ

ಇರದ ದಾರಿಗಳ ಒಮ್ಮೆ ಶೋಧಿಸಿ ನೋಡು
‘ಇಲ್ಲಿ ಮೊದಲು ಏನೂ ಇರಲಿಲ್ಲ’
ಎಂದು ತಿಳಿಯುವುದು
ಸಿಕ್ಕದ್ದು ಕಳೆದು
ಎಲ್ಲವೂ ನಶ್ವರ ಎಂಬ ಸತ್ಯ ಬೆಳಗುವುದು

ಗುರಿಗೂ ಗಮ್ಯಕೂ
ಅದೇಷ್ಟು ದೂರ
ಮುಗಿಲಿಗೂ ಕಡಲಿಗೂ ಇದ್ದಷ್ಟೇ ಅಂತರ
ಅಂಗೈಗೆ ಸಿಕ್ಕಂತೆ ಸಿಕ್ಕಿ
ಮರಳ ಕಣಗಳಂತೆ ಸೋರಿ
ಬರಿದಾಗುವ ಬೆರಗು
ಈ ಬದುಕ ವೈಖರಿ.

Previous post ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
Next post ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…

Related Posts

ನಾನೊಂದು ನೀರ್ಗುಳ್ಳೆ
Share:
Poems

ನಾನೊಂದು ನೀರ್ಗುಳ್ಳೆ

September 6, 2023 ಕೆ.ಆರ್ ಮಂಗಳಾ
ಕಾಲದ ಊದುಗೊಳವೆಯಲಿ ನಿರಂತರವಾಗಿ ಉಕ್ಕುತಿವೆ ಅನಂತಾನಂತ ನೀರ್ಗುಳ್ಳೆ ಎಲ್ಲಕೂ ಒಂದೇ ಹುಟ್ಟು ಒಂದೇ ಬಗೆಯ ಸಂಯೋಜನೆ ನಾ ಬೇರೆ ನೀ ಬೇರೆ ಅಂವ ಬೇರೆ ಇಂವ ಬೇರೆ ನಾ ಮೇಲು ನೀ ಕೆಳಗೆ...
ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...

Comments 2

  1. ದಿನೇಶ್ ಕೆ.ಪಿ
    Feb 18, 2025 Reply

    ಬೆರಗೇ ಬದಲಾಗುವಾಗ ಉಳಿಯೋದೇನಿದೆ…. ಬರೀ ಶೂನ್ಯ 😒

  2. ಕಾಳಿದಾಸ ಲಮಾಣಿ
    Feb 22, 2025 Reply

    ಬಣ್ಣನೆ ಬೇಕೇ ಬಯಲಿಗೆ, ಬರಿದಾಗುವ ಚೆಲುವಿಗೆ… ಆದರೂ ಜೀವನ ಶೂನ್ಯ ಮಾತ್ರ ಅಲ್ಲಾ ಅಣ್ಣಾ.

Leave a Reply to ಕಾಳಿದಾಸ ಲಮಾಣಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಕಣ್ಣ ದೀಪ
ಕಣ್ಣ ದೀಪ
September 7, 2021
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
Copyright © 2026 Bayalu