Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
Copyright © 2025 Bayalu