Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣನಾಗುವುದು…
ಶರಣನಾಗುವುದು…
February 10, 2023
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ನಾನು ಯಾರು?
ನಾನು ಯಾರು?
December 8, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
Copyright © 2026 Bayalu