Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ನೆಲದ ನಿಧಾನ
ನೆಲದ ನಿಧಾನ
April 29, 2018
ಹುಡುಕಾಟ…
ಹುಡುಕಾಟ…
August 8, 2021
ಗೇಣು ದಾರಿ
ಗೇಣು ದಾರಿ
July 10, 2023
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
Copyright © 2026 Bayalu