Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
Copyright © 2026 Bayalu