Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave a Reply to Geetha Jayraj Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಕೇಳಿಸಿತೇ?
ಕೇಳಿಸಿತೇ?
April 6, 2024
ನೆಮ್ಮದಿ
ನೆಮ್ಮದಿ
April 6, 2020
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ಶರಣ- ಎಂದರೆ…
ಶರಣ- ಎಂದರೆ…
March 6, 2020
ಎರವಲು ಮನೆ…
ಎರವಲು ಮನೆ…
August 10, 2023
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
Copyright © 2025 Bayalu