Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಬಯಲಾದ ದೇವರು
Share:
Poems

ಬಯಲಾದ ದೇವರು

January 15, 2026 ಜ್ಯೋತಿಲಿಂಗಪ್ಪ
ಈ ದೇವರು ಒಂದು ಕನಸು ನಿಜವೂ ಅಹುದು ಸುಳ್ಳೂ ಅಹುದು ಕಲ್ಪನೆಯ ಹಾಗೆ ಕಾಣುವುದು ಕಾಣದು ನಂಬಿದರೆ ಕೇಡಿಲ್ಲ ನಂಬದಿರಲೂ ಕೇಡಿಲ್ಲ ಕೇಡೆಲ್ಲವೂ ನನ್ನವು ಈ ಸುಳ್ಳಿಗೊಂದು ಕಾಣಿಸಲಾರೆ...
ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave a Reply to Geetha Jayraj Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಹಣತೆ ಸಾಕು
ಹಣತೆ ಸಾಕು
September 14, 2024
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ಭವ ರಾಟಾಳ
ಭವ ರಾಟಾಳ
September 10, 2022
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
Copyright © 2026 Bayalu