Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave a Reply to ಕವಿತಾ ಲಕ್ಷ್ಮೇಶ್ವರ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಹಣತೆಯ ಹಂಗು
ಹಣತೆಯ ಹಂಗು
October 19, 2025
Copyright © 2025 Bayalu