Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕ ಬೆಂಬತ್ತಿ…
Share:
Poems November 9, 2021 ಕೆ.ಆರ್ ಮಂಗಳಾ

ಬೆಳಕ ಬೆಂಬತ್ತಿ…

ಸಾಲು ಸಾಲು ಹಣತೆಗಳ ಹಚ್ಚಿ
ನೋಡುತ್ತಲೇ ಇದೆ
ಆಸೆಯಿಂದ ಈ ಮನ
ಬೆಳಕ ಗೋರಲು… ಒಳಗ ಬೆಳಗಲು…

ಕತ್ತಲೆಯ ಭಯವೋ, ಬೆಳಕಿನ ಮೋಹವೋ..

ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ
ಅನಾದಿ ಕಾಲದ ಅಜ್ಞಾನದ ಕಮಟು
ಆ ದೂಳು, ಆ ಗದ್ದಲ
ಸಾವಿರ ಸಾವಿರ ಇರುಳು
ಬಸಿದು ಕುಳಿತಂತೆ ನನ್ನೊಳಗೆ
ದಟ್ಟಗತ್ತಲು, ಕಾರ್ಗತ್ತಲು, ಕಡುಗತ್ತಲು
ಭವದ ಈ ಗವಗತ್ತಲನಟ್ಟಲು
ಸಾವಿರ ಸೂರ್ಯರೂ ಸಾಲಲಿಕ್ಕಿಲ್ಲ!

ಅಷ್ಟಿಷ್ಟು ಬತ್ತಿಗೆ, ಇಷ್ಟಿಷ್ಟು ಎಣ್ಣೆ
ಉರಿಯು ದಾಟುತಲಿರುವ
ಮರ್ಮವ ಕಾಣಬಲ್ಲೆಯಾ?

ಕಾಯ- ಜೀವದ ಬೆಸುಗೆಯಲಿ
ಅನೂಹ್ಯ ಪ್ರಕೃತಿಯೊಳಿರುವ
ಜೀವಚೈತನ್ಯವ ನೋಡಬಲ್ಲೆಯಾ?

-ಗುರು ಹಚ್ಚಿದ ಕಿಡಿಯಲ್ಲಿ
ಕಪ್ಪಾದ ಕಣ್ಣಾಲೆಯೊಳಗೊಂದು ಮಿಂಚು!
ಕಂದೀಲು ಹಿಡಿದು
ಬೆಳಕ ಹುಡುಕಲು ಹೊರಟ
ಮನ ನಾಚಿತ್ತು… ನಾಚಿತ್ತು…

Previous post ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
Next post ನಾನು ಯಾರು?
ನಾನು ಯಾರು?

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾಯದ ಗಾಯ
ಮಾಯದ ಗಾಯ
October 19, 2025
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ನಾನು ಯಾರು?
ನಾನು ಯಾರು?
December 8, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಭಾರ
ಭಾರ
October 6, 2020
Copyright © 2026 Bayalu