Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕ ಬೆಂಬತ್ತಿ…
Share:
Poems November 9, 2021 ಕೆ.ಆರ್ ಮಂಗಳಾ

ಬೆಳಕ ಬೆಂಬತ್ತಿ…

ಸಾಲು ಸಾಲು ಹಣತೆಗಳ ಹಚ್ಚಿ
ನೋಡುತ್ತಲೇ ಇದೆ
ಆಸೆಯಿಂದ ಈ ಮನ
ಬೆಳಕ ಗೋರಲು… ಒಳಗ ಬೆಳಗಲು…

ಕತ್ತಲೆಯ ಭಯವೋ, ಬೆಳಕಿನ ಮೋಹವೋ..

ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ
ಅನಾದಿ ಕಾಲದ ಅಜ್ಞಾನದ ಕಮಟು
ಆ ದೂಳು, ಆ ಗದ್ದಲ
ಸಾವಿರ ಸಾವಿರ ಇರುಳು
ಬಸಿದು ಕುಳಿತಂತೆ ನನ್ನೊಳಗೆ
ದಟ್ಟಗತ್ತಲು, ಕಾರ್ಗತ್ತಲು, ಕಡುಗತ್ತಲು
ಭವದ ಈ ಗವಗತ್ತಲನಟ್ಟಲು
ಸಾವಿರ ಸೂರ್ಯರೂ ಸಾಲಲಿಕ್ಕಿಲ್ಲ!

ಅಷ್ಟಿಷ್ಟು ಬತ್ತಿಗೆ, ಇಷ್ಟಿಷ್ಟು ಎಣ್ಣೆ
ಉರಿಯು ದಾಟುತಲಿರುವ
ಮರ್ಮವ ಕಾಣಬಲ್ಲೆಯಾ?

ಕಾಯ- ಜೀವದ ಬೆಸುಗೆಯಲಿ
ಅನೂಹ್ಯ ಪ್ರಕೃತಿಯೊಳಿರುವ
ಜೀವಚೈತನ್ಯವ ನೋಡಬಲ್ಲೆಯಾ?

-ಗುರು ಹಚ್ಚಿದ ಕಿಡಿಯಲ್ಲಿ
ಕಪ್ಪಾದ ಕಣ್ಣಾಲೆಯೊಳಗೊಂದು ಮಿಂಚು!
ಕಂದೀಲು ಹಿಡಿದು
ಬೆಳಕ ಹುಡುಕಲು ಹೊರಟ
ಮನ ನಾಚಿತ್ತು… ನಾಚಿತ್ತು…

Previous post ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
Next post ನಾನು ಯಾರು?
ನಾನು ಯಾರು?

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ ಕನ್ನಡಿ
ಈ ಕನ್ನಡಿ
March 6, 2024
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಕಣ್ಣ ಮುಂದಿನ ಬೆಳಕು
ಕಣ್ಣ ಮುಂದಿನ ಬೆಳಕು
September 6, 2026
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
Copyright © 2026 Bayalu