Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕ ಬೆಂಬತ್ತಿ…
Share:
Poems November 9, 2021 ಕೆ.ಆರ್ ಮಂಗಳಾ

ಬೆಳಕ ಬೆಂಬತ್ತಿ…

ಸಾಲು ಸಾಲು ಹಣತೆಗಳ ಹಚ್ಚಿ
ನೋಡುತ್ತಲೇ ಇದೆ
ಆಸೆಯಿಂದ ಈ ಮನ
ಬೆಳಕ ಗೋರಲು… ಒಳಗ ಬೆಳಗಲು…

ಕತ್ತಲೆಯ ಭಯವೋ, ಬೆಳಕಿನ ಮೋಹವೋ..

ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ
ಅನಾದಿ ಕಾಲದ ಅಜ್ಞಾನದ ಕಮಟು
ಆ ದೂಳು, ಆ ಗದ್ದಲ
ಸಾವಿರ ಸಾವಿರ ಇರುಳು
ಬಸಿದು ಕುಳಿತಂತೆ ನನ್ನೊಳಗೆ
ದಟ್ಟಗತ್ತಲು, ಕಾರ್ಗತ್ತಲು, ಕಡುಗತ್ತಲು
ಭವದ ಈ ಗವಗತ್ತಲನಟ್ಟಲು
ಸಾವಿರ ಸೂರ್ಯರೂ ಸಾಲಲಿಕ್ಕಿಲ್ಲ!

ಅಷ್ಟಿಷ್ಟು ಬತ್ತಿಗೆ, ಇಷ್ಟಿಷ್ಟು ಎಣ್ಣೆ
ಉರಿಯು ದಾಟುತಲಿರುವ
ಮರ್ಮವ ಕಾಣಬಲ್ಲೆಯಾ?

ಕಾಯ- ಜೀವದ ಬೆಸುಗೆಯಲಿ
ಅನೂಹ್ಯ ಪ್ರಕೃತಿಯೊಳಿರುವ
ಜೀವಚೈತನ್ಯವ ನೋಡಬಲ್ಲೆಯಾ?

-ಗುರು ಹಚ್ಚಿದ ಕಿಡಿಯಲ್ಲಿ
ಕಪ್ಪಾದ ಕಣ್ಣಾಲೆಯೊಳಗೊಂದು ಮಿಂಚು!
ಕಂದೀಲು ಹಿಡಿದು
ಬೆಳಕ ಹುಡುಕಲು ಹೊರಟ
ಮನ ನಾಚಿತ್ತು… ನಾಚಿತ್ತು…

Previous post ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
Next post ನಾನು ಯಾರು?
ನಾನು ಯಾರು?

Related Posts

ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕೇಳಿಸಿತೇ?
ಕೇಳಿಸಿತೇ?
April 6, 2024
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
Copyright © 2026 Bayalu