Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ನಾನು ಯಾರು?
ನಾನು ಯಾರು?
December 8, 2021
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ನಾನು… ನನ್ನದು
ನಾನು… ನನ್ನದು
July 4, 2021
Copyright © 2026 Bayalu