Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಸಂತೆಯ ಸಂತ
Share:
Poems

ಸಂತೆಯ ಸಂತ

September 7, 2020 ಜ್ಯೋತಿಲಿಂಗಪ್ಪ
ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...
ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ಶಿವಯೋಗ
ಶಿವಯೋಗ
July 4, 2021
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
Copyright © 2026 Bayalu