Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ದಡ ಸೋಂಕದ ಅಲೆಗಳು
Share:
Poems

ದಡ ಸೋಂಕದ ಅಲೆಗಳು

July 10, 2025 ಜ್ಯೋತಿಲಿಂಗಪ್ಪ
ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...
ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave a Reply to Savitha Bannur Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಶಿವನ ಕುದುರೆ…
ಶಿವನ ಕುದುರೆ…
May 1, 2019
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ನೆಮ್ಮದಿ
ನೆಮ್ಮದಿ
April 6, 2020
Copyright © 2026 Bayalu