Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave a Reply to Savitha Bannur Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ನೋಟದ ಕೂಟ…
ನೋಟದ ಕೂಟ…
May 10, 2023
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
Copyright © 2025 Bayalu