Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave a Reply to ಶಿವಕುಮಾರ್ ಎಲ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಶರಣನಾಗುವುದು…
ಶರಣನಾಗುವುದು…
February 10, 2023
Copyright © 2026 Bayalu