Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...
ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
Copyright © 2025 Bayalu