Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
Copyright © 2025 Bayalu