Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...
ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಇದ್ದಷ್ಟೇ…
ಇದ್ದಷ್ಟೇ…
January 10, 2021
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ವೀರ
ವೀರ
April 29, 2018
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
Copyright © 2026 Bayalu