Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...
ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
Copyright © 2025 Bayalu