Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಸನಾತನ ಧರ್ಮ
ಸನಾತನ ಧರ್ಮ
October 10, 2023
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ವಚನ–ಶ್ರಮಣಧಾರೆಗಳ ಸಂಧಿಭೂಮಿ
ವಚನ–ಶ್ರಮಣಧಾರೆಗಳ ಸಂಧಿಭೂಮಿ
April 5, 2026
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಗೇಣು ದಾರಿ
ಗೇಣು ದಾರಿ
July 10, 2023
Copyright © 2026 Bayalu