Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ನೆಮ್ಮದಿ
ನೆಮ್ಮದಿ
April 6, 2020
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
Copyright © 2026 Bayalu