Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave a Reply to Ramesh. M.Y Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಹುಡುಕಾಟ
ಹುಡುಕಾಟ
January 15, 2026
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
Copyright © 2026 Bayalu