Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave a Reply to ಪೆರೂರು ಜಾರು, ಉಡುಪಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
Copyright © 2026 Bayalu