Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಒಳಗಣ ಮರ
ಒಳಗಣ ಮರ
March 12, 2022
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
Copyright © 2026 Bayalu