Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ಹುಡುಕಾಟ
Share:
Poems

ಹುಡುಕಾಟ

January 15, 2026 ಜಬೀವುಲ್ಲಾ ಎಂ.ಅಸದ್
ಭವದ ಒಡಲಿಗೆ ಬಿದ್ದ ಮೇಲೆ ಇನ್ನೆಲ್ಲಿಯ ಬಿಡುಗಡೆ ಇಹದ ಬಾಳು ಬಯಕೆಗಳ ಸಂಕೋಲೆ ಜಡಿದ ಬೇಗುದಿಯ ಕಡಲು ಈಜಬೇಕಷ್ಟೆ ಕಾಣದ ತೀರ ಭೂಮಿ, ಬಾನು ಒಂದಾದಂತೆ ಕಾಣುವ ದಿಗಂತ ಕಣ್ಣಿಗೆ...
ಹುಡುಕಾಟ
Share:
Poems

ಹುಡುಕಾಟ

July 21, 2024 ಜ್ಯೋತಿಲಿಂಗಪ್ಪ
ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಇದ್ದಷ್ಟೇ…
ಇದ್ದಷ್ಟೇ…
January 10, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಮೂರನೇ ಕಣ್ಣು: ಅನಿಮಿಷ(11)
ಮೂರನೇ ಕಣ್ಣು: ಅನಿಮಿಷ(11)
October 19, 2025
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಕಣ್ಣ ದೀಪ
ಕಣ್ಣ ದೀಪ
September 7, 2021
ಹಾಯ್ಕು
ಹಾಯ್ಕು
September 6, 2023
ವಚನ – ಚಿಂತನ
ವಚನ – ಚಿಂತನ
October 10, 2023
Copyright © 2026 Bayalu