Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave a Reply to ಸರಳಾ ಚಂದ್ರಶೇಖರ ಸಾಲೀಮಠ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಪೊರೆವ ದನಿ…
ಪೊರೆವ ದನಿ…
August 11, 2025
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ದಾರಿ ಬಿಡಿ…
ದಾರಿ ಬಿಡಿ…
December 6, 2020
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
Copyright © 2026 Bayalu