Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮನವೇ ಮನವೇ…
Share:
Poems May 6, 2020 Bayalu

ಮನವೇ ಮನವೇ…

ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ
ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ//

ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ
ವಿಲವಿಲ ಎನ್ನುತ ನಲುಗಿದೆ ನೀನು ನಲಿವಿಲ್ಲ ಮನವೇ
ಒಲವಿಂದಲೆ ನೀ ಬಲೆ ಮೂರಕ್ಕೆ ಬಲಿಯಾದೆ ಮನವೇ
ನೆಲೆ ತಾನರಿಯದೆ ಅಲೆಯುವ ಸೊಣಗ ಅಲೆದಂತೆ ಮನವೇ //1//

ಹರಿಯುವ ನೀರಿಗೆ ಬೆರಳಿಟ್ಟುಂಡರೆ ಹಿರಿದುಂಟೇ ಮನವೇ
ಕರಿ ಕುನ್ನಿಯು ತಾ ಕೆರ ಕಚ್ಚಾಡಲು ಸಿರಿಯುಂಟೇ ಮನವೇ
ಉರಗನ ಬಾಯಲಿ ಇರುತಿಹ ಕಪ್ಪೆಯ ಪರಿನೀನೆಲೆ ಮನವೇ
ಮರಣದ ಬಾಧೆ ಬರುತಿದೆ ಮುಂದೆ ಮೆರೆಯದಿರು ಮನವೇ //2//

ಸಿರಿ ಸುಖವೆಲ್ಲ ಹಿರಿ ಸಂತೆಯು ತಾ ಕರಗುವ ಪರಿಮನವೇ
ಮರುತಗೆ ಇದಿರು ಉರಿಯುವ ಜ್ಯೋತಿ ಇರಲುಂಟೇ ಮನವೇ
ಹಿರಿಹಿರಿ ನಂಬಿದೆ ಕರಗುವ ಸಿರಿಯನೆ ಮರುಳಾದೆಲೆ ಮನವೇ
ಗುರಿಯನು ಕಾಣದೆ ಧರೆ ಸಿರಿಯೊಳಗೆ ಚರಿಸದಿರು ಮನವೇ //3//

ಇಳೆಯಲ್ಲಾಡುತ ಒಳಬೆಳಗನ್ನು ಕಳೆದೆ ಎಲೆ ಮನವೇ
ಒಳ ಸೇರುತ ನೀ ಕಳೆಬೆಳಗಿನೊಳು ಮುಳುಗುತಲಿರು ಮನವೇ
ಇಳೆಯನು ಬೆಳಗುವ ಇನಶಶಿ ಎಲ್ಲ ಒಳಗಿವೆ ತಿಳಿ ಮನವೇ
ಅಳಿಯದ ಬೆಳಗು ಒಳಗಿದೆ ತಿಳಿದು ತಿಳಿಯಾಗಲೆ ಮನವೇ //4//

ಸನ್ನುತ ಶರಣರ ಬೆನ್ನಿಗೆ ಬೀಳು ಉನ್ನತಿ ಎಲೆ ಮನವೇ
ಬನ್ನವ ಅಳಿಸಿ ರನ್ನವ ತಿಳಿಸುವರಿನ್ನಾರೆಲೆ ಮನವೇ
ಅನ್ಯವ ತೊರೆಸಿ ಭಿನ್ನವ ಕಳೆಯುವರಿನ್ನಾರೆಲೆ ಮನವೇ
ಮುನ್ನಿನ ನಿರವಯಲುನ್ನತ ನಿನ್ನೊಳು ತೋರುವರೆಲೆ ಮನವೇ //5//

-ಮಹಾಲಿಂಗ ಶಿವಯೋಗಿಗಳು

Previous post ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
Next post ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು

Related Posts

ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...
ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...

Comments 2

  1. B.S.Patil
    May 14, 2020 Reply

    ಮನವೇ ತತ್ವಪದ ಓದುತ್ತಾ ಹೋದಂತಡ ಹಾಡಿಸಿಕೊಳ್ಳತೊಡಗಿತು. ಒಂದೊಂದು ಸಾಲೂ ಬಹಳ ಹಿಡಿಸಿದವು. ಶ್ರೀಗಳಿಗೆ ಶರಣು.

  2. Channappa Vali
    May 14, 2020 Reply

    ಮನವೇ ಮನವೇ… ಮತ್ತು ಹೆಸರಿಲ್ಲದಾ ಊರಿನ ಹಾಡು ಎರಡೂ ಬಹಳ ಚನ್ನಾಗಿವೆ. ಸ್ವರ ವಚನಗಳನ್ನು ಓದಿದಂತೆ ಭಾಸವಾಯಿತು. ಎರಡಕ್ಕೂ ರಾಗ ಹಾಕಿ ಹಾಡುವಂತಿವೆ. ಪ್ರತಿ ಸಾಲುಗಳೂ ಮನನಯೋಗ್ಯವಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ಗೇಣು ದಾರಿ
ಗೇಣು ದಾರಿ
July 10, 2023
Copyright © 2026 Bayalu